ಬೆಂಗಳೂರು : ಕರ್ನಾಟಕ ಸಿ ಎಂ ಸಿಟಿ ರೌಂಡ್, ಬೆಂಗಳೂರು ಅಲಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಿರುವ ಕಾರಣ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಳೆ ನೀರಿನಿಂದ ಮುಳುಗಡೆಗೊಂಡ ಸ್ಥಳಗಳನ್ನು ವೀಕ್ಷಿಸಿದ್ದಾರೆ ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ವಾಹನ ಸವಾರರಿಗೆ ತೊಂದರೆಯಾಗುತ್ತದೆಯೆಂದು ಇಂದು ಕೆಲವು ಸ್ಥಳಗಳಿಗೆ ಮಾತ್ರ ಭೇಟಿ ನೀಡಿದ್ದೇನೆ. ಬುಧವಾರ ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರದ ಮಳೆಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತೇನೆ ಎಂದು ಸೋಶಿಯಲ್ ಮೀಡಿಯಾ ಅಧಿಕೃತ ಖಾತೆಯಿಂದ ತಿಳಿಸಿದ್ದಾರೆ,
ನಗರದ ಎಲ್ಲ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸುತ್ತೇವೆ. ಅಧಿಕಾರಿಗಳು ಯಾವೆಲ್ಲ ಕ್ರಮ ವಹಿಸಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡುತ್ತೇನೆ.
ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿವೆ, ಜೊತೆಗೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರ ಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ.ಮೀ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿ.ಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಕಿ.ಮೀ ಉದ್ದದ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮೀ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ನೆರವಿನಿಂದ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ
44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮ
ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ,
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ
ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು ದುಃಖದ ವಿಷಯ. ಸರ್ಕಾರದ ವತಿಯಿಂದ ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು
4292 ಕಡೆ ಒತ್ತುವರಿಯಾಗಿದ್ದು, ಈ ಪೈಕಿ 2326 ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಒತ್ತುವರಿಯಾಗದಂತೆ ನೋಡಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ. ಮಳೆಯಿಂದ ಹಾನಿಗೊಳಗಾದ ಬೆಂಗಳೂರು ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ,